ಕೆದಿಲ ಶ್ರೀ ಉಳ್ಳಾಕ್ಲು, ಧೂಮಾವತಿ, ಮಲರಾಯ ದೈವಸ್ಥಾನಕ್ಕೆ ಸಂಸದರು, ಮಾಜಿ ಶಾಸಕರು ಭೇಟಿ

0

ಪುತ್ತೂರು: ಬಂಟ್ವಾಳ ತಾಲೂಕು ಕೆದಿಲ ಶ್ರೀ ಉಳ್ಳಾಕ್ಲು, ಧೂಮಾವತಿ, ಮಲರಾಯ ದೈವಸ್ಥಾನಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರುರವರು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.

ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜೆ.ಕೃಷ್ಣ ಭಟ್ ‘ಕೇಶವ ಕೃಪಾ’ ಮಿರಾವನರವರು ದೈವದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿ, ಶಾಲು ಹೊದಿಸಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ‌ ಸಹಿತ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here