ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

0

ಪುತ್ತೂರು: ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಆಚರಿಸಲಾಯಿತು. ಅತಿಥಿಗಳಾಗಿ ಕೆ.ವಿ.ಜಿ ಮಹಾ ವಿದ್ಯಾಲಯದ ಉಪನ್ಯಾಸಕ ಡಾ. ಪ್ರವೀಣ್ ಎಸ್.ಡಿ ಹಾಗೂ ಎಸ್.ಜಿ.ಎಂ ಪ್ರೌಢಶಾಲೆಯ ಶಾಲಾಭಿವೃದ್ದಿ ಸಮಿತಿಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಶೋಕ್ ಎಸ್.ಡಿ ಭಾಗವಹಿಸಿದ್ದರು.
ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈವುದರ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಕೃಷಿ ಹಾಗೂ ಪರಿಸರ ಕಾರ್ಯದರ್ಶಿ ನಾಗೇಶ್ ಪಟ್ಟೆಮಜಲು, ಸಂಘಟನಾ ಕಾರ್ಯದರ್ಶಿ ಗೌತಮ್ ಪಟ್ಟೆಮಜಲು ಹಾಗೂ ಹರೀಶ್ ಅಲೇಕಿ, ಕ್ರೀಡಾ ಕಾರ್ಯದರ್ಶಿ ಕಿರಣ್ ಎಸ್.ಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ಎಸ್.ಡಿ ಹಾಗೂ ತಿಲಕ್ ರಾಜ್ ಕರುಂಬಾರು, ಸದಸ್ಯರಾದ ಪ್ರಮೋದ್ ಅಲೇಕಿ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಹಾಗೂ ಕಿಶೋರ್ ಎಸ್.ಡಿ. ಉಪಸ್ಥಿತರಿದ್ದರು.
ಯುವಕ ಮಂಡಲ ಅಧ್ಯಕ್ಷ ಗೌತಮ್ ರಾಜ್ ಕರುಂಬಾರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here