ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳಿಂದ ಸಂಸದರ ಭೇಟಿ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಸಂಸದರಾದ ನಳೀನ್ ಕುಮಾರ್ ಕಟೀಲ್ ರವರನ್ನು ಭೇಟಿಯಾಗಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಾಹಿತಿ ಪಡೆದುಕೊಂಡ ಸಂಸದರು ಅಭಿವೃದ್ದಿ ಕಾರ್ಯಕ್ಕೆ ಮುಂದಿನ ದಿನಗಳಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧೀರಜ್ ಗೌಡ ಹಿರ್ಕುಡೆಲು, ಕಾರ್ಯದರ್ಶಿ ಕೃಷ್ಣರಾಜ ಎರ್ಕಡಿತ್ತಾಯ, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಮನೋಹರ ನಾಯ್ಕ್ ಕೊಳಕ್ಕಿಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಧೀರ್ ಪ್ರಸಾದ್ ಆನಾಜೆ, ಗಿರಿಧರ ಗೌಡ ಗೋಮುಖ, ಸುಬ್ರಾಯ ನಾಯ್ಕ್ ಆನಾಜೆ, ಚಂದ್ರಶೇಖರ ನಾಯ್ಕ್  ಕುದುಮಾನ್, ವಿವಿಧ ಸಮಿತಿಯ ಪದಾಧಿಕಾರಿಗಳಾದ ಮೋಹನ್ ನಾಯ್ಕ್ ಆನಾಜೆ, ಜನದೀಶ್ ನಾಯ್ಕ್ ಬಟ್ರುಪ್ಪಾಡಿ, ಸುಜಿತ್ ನಾಯ್ಕ್ ಹಣಿಯೂರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here