ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯ ಆಡಳಿತಾಧಿಕಾರಿಯಾಗಿ ಶಿವಶಂಕರ ಜೆ. ಅಧಿಕಾರ ಸ್ವೀಕಾರ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ಅಮ್ಮನವರ ದೇಗುಲದ ಪ್ರಭಾರ ಆಡಳಿತಾಧಿಕಾರಿಯಾಗಿ ಪುತ್ತೂರು ತಾಲೂಕು ತಹಶೀಲ್ದಾರ್ ಶಿವಶಂಕರ ಜೆ. ಅವರು ಅಧಿಕಾರ ಸ್ವೀಕರಿಸಿದರು.


ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿ ಮುಗಿದಿದ್ದರಿಂದ ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಇವರು ದೇವಾಲಯದ ಲೆಕ್ಕ ಪತ್ರಗಳ ದಾಖಲೆಯನ್ನು ಪರಿಶೀಲಿಸಿದರಲ್ಲದೆ, ದೇವಾಲಯದ ದಿನ ನಿತ್ಯದ ವ್ಯವಸ್ಥೆಗಳ ಕುರಿತು ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್ ಇವರಿಂದ ವಿವರಣೆ ಪಡೆದುಕೊಂಡರು. ಅಲ್ಲದೇ, ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ನೀರಿನ ಮಟ್ಟದ ಮಾಹಿತಿ ಪಡೆದರು.


ಈ ಸಂದರ್ಭ ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ, ಗ್ರಾಮ ಕರಣಿಕ ನರಿಯಪ್ಪ, ದೇವಾಲಯದ ಸಿಬ್ಬಂದಿಗಳಾದ ಕೃಷ್ಣ ಪ್ರಸಾದ್ ಬಡಿಲ, ದಿವಾಕರ ಗೌಡ, ಪದ್ಮನಾಭ ಕುಲಾಲ್, ಕೃಷ್ಣಪ್ರಸಾದ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here