ಕಡಬ: ಕುಸಿದು ಬಿದ್ದು ವ್ಯಕ್ತಿ ಸಾವು

0

ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ.

ಕುಟ್ರುಪ್ಪಾಡಿ ಗ್ರಾಮದ ಕೊಲ್ಯದ ಕಟ್ಟೆ ಎಂಬಲ್ಲಿ ಸಿ.ಪಿ.ಸೈಮನ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ನಾಗರಹಾಲ ಗ್ರಾಮದ ನಿರುಪಾದಿ ಘಟ್ಟನೂರು(44ವ.)ಮೃತಪಟ್ಟವರಾಗಿದ್ದಾರೆ. ಇವರು ಜ.20ರಂದು ಬೆಳಿಗ್ಗೆ ಕೆಲಸದವರೊಂದಿಗೆ ಊಟ ಮಾಡುತ್ತಿದ್ದ ವೇಳೆ ಒಮ್ಮೇಲೆ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ಕೆಲಸಗಾರರಾದ ಹಾರೀಸ್ ಹಾಗೂ ಯಶೋದರ ಅವರು ಉಪಚರಿಸಿ ಜೀಪಿನಲ್ಲಿ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತ ನಿರುಪಾದಿಯವರ ಪತ್ನಿ ಮಹಾದೇವಿ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here