ಶ್ರೀ ಸತ್ಯಸಾಯಿ ಶಿಶು ವಿಕಾಸ ಕೇಂದ್ರದ ಮಕ್ಕಳ ವಾರ್ಷಿಕ ಹಬ್ಬ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಮತ್ತು ಪ್ರಭಾಕರ್ ರಾವ್ ಮೆಮೋರಿಯಲ್ ಟ್ರಸ್ಟ್ ನಡೆಸುತ್ತಿರುವ ಸತ್ಯಸಾಯಿ ಶಿಶು ವಿಕಾಸ ಕೇಂದ್ರದ ಮಕ್ಕಳ ವಾರ್ಷಿಕ ಹಬ್ಬ ಮತ್ತು ಶ್ರೀ ಸತ್ಯಸಾಯಿ ಬಾಬಾರವರ ಪಾದಾರ್ಪಣಾ ದಿನಾಚರಣೆ ಜ.30ರಂದು ಕೋರ್ಟ್ ರಸ್ತೆಯ ಶ್ರೀ ಸತ್ಯಸಾಯಿ ಮಂದಿರದಲ್ಲಿ ಜರುಗಿತು.

ಮಕ್ಕಳ ಹಬ್ಬವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖಾ ಮಾತನಾಡಿ, ಹೆತ್ತವರು ಚಿಕ್ಕ ಮಕ್ಕಳ ಋಣಾತ್ಮಕ ಚಟುವಟಿಕೆಗಳನ್ನು ಪ್ರೋತ್ಸಾಹಿಸದೆ, ಅವರಲ್ಲಿ ಸರಿ- ತಪ್ಪುಗಳ ಅರಿವು ಮೂಡಿಸಬೇಕು ಮತ್ತು ಇನ್ನೊಂದು ಮಗುವಿನೊಂದಿಗೆ ಹೋಲಿಕೆ ಮಾಡಬಾರದು ಎಂದು ಪೋಷಕರಿಗೆ ಕಿವಿ ಮಾತು ಹೇಳಿದರು.
ಸತ್ಯಸಾಯಿ ಸೇವಾ ಸಂಸ್ಥೆಗಳು ದ.ಕ ಜಿಲ್ಲಾಧ್ಯಕ್ಷ ಪ್ರಸನ್ನ ಯನ್ ಭಟ್ ಸಂಸ್ಥೆಯ ಚಟುವಟಿಕೆಗಳ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಭಾಕರ್ ರಾವ್ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಡಾ| ಸತ್ಯ ಸುಂದರ ರಾವ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಚಂದ್ರಕಲಾ ವಾರ್ಷಿಕ ವರದಿ ವಾಚಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಸಾಧನೆಗೈದ ವಿದ್ಯಾರ್ಥಿನಿ ಜಾನ್ವಿ ಕೆ ಪಿಯವರನ್ನು ಅಭಿನಂದಿಸಲಾಯಿತು. ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕ ರಘುನಾಥ ರೈ ಕಾರ್ಯಕ್ರಮವನ್ನು ನಿರೂಪಿಸಿದರು.‌ ಸಭಾ ಕಾರ್ಯಕ್ರಮದ ನಂತರ ಪುಟಾಣಿಗಳಿಂದ ಮನರಂಜನಾ ಕಾರ್ಯಕ್ರಮ ಜರುಗಿತು.

LEAVE A REPLY

Please enter your comment!
Please enter your name here