ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ, ಮಲರಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಚಪ್ಪರ ಮುಹೂರ್ತ

0

ಮಾ.11ರಿಂದ ಮಾ.15ರವರೆಗೆ ಬ್ರಹ್ಮಕಲಶೋತ್ಸವ

ವಿಟ್ಲ: ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ, ಮಲರಾಯ ದೈವಸ್ಥಾನದಲ್ಲಿ ಮಾ.11ರಿಂದ ಮಾ.15ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.9ರಂದು ಬೆಳಿಗ್ಗೆ ಚಪ್ಪರ ಮೂಹೂರ್ತ ನಡೆಯಿತು.

ಪ್ರಗತಿಪರ ಕೃಷಿಕರಾದ ಬಾಬು ಮೂಲ್ಯ ಕಜೆರವರು ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಜೆ. ಕೃಷ್ಣಭಟ್ ಮೀರಾವನ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ನಿವೃತ್ತ ಸೈನಿಕರಾದ ಜನಾರ್ಧನ ಕುಲಾಲ್ ಗಾಣದ ಕೊಟ್ಯ ಸೇರಿದಂತೆ ಎಲ್ಲಾ ಸಮಿತಿಗಳ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here