ದಮ್ಮಾಮ್‌ನಲ್ಲಿ ಗ್ಲೋಬಲ್ ಮ್ಯಾನ್ ಅವಾರ್ಡ್ ಸ್ವೀಕರಿಸಿದ ಉದ್ಯಮಿ ಅಶ್ರಫ್ ಶಾ ಮಾಂತೂರು

0

ಪುತ್ತೂರು: ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ಫೆ.8ರಂದು ನಡೆದ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಅನಿವಾಸಿ ಉದ್ಯಮಿ, ಬೆಳಂದೂರು ಈಡನ್ ಸ್ಕೂಲ್‌ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತೂರು ಅವರಿಗೆ ಗ್ಲೋಬಲ್ ಮ್ಯಾನ್ ಅವಾರ್ಡ್ ನೀಡಿ ಗೌರವಿಸಲಾಯಿತು.

ಅಶ್ರಫ್ ಶಾ ಮಾಂತೂರು ಅವರು ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್, ಪುತ್ತೂರು ಶಾಸಕ ಅಶೋಕ್ ರೈ, ಶಾಸಕ ಎನ್.ಎ ಹ್ಯಾರಿಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here