ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಬೊಳುವಾರು ಹಿರಣ್ಯ ಸಂಕೀರ್ಣದಲ್ಲಿ ಇರುವ ಜ್ಞಾನಜೋತಿ ತಾಂತ್ರಿಕ ಶಿಕ್ಷಣ ಕೇಂದ್ರದ 2024ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಫೆ.15ರಂದು ಕಾರ್ಜಾಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಧೂಮಾವತಿ ದೇವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪುತ್ತೂರು ಗೃಹ ನಿರ್ಮಾಣ ಸಹಕಾರ ಮಂಡಳಿಯ ಕಾರ್ಯನಿರ್ವಹಣಾಧಿಕಾರಿಗಳಾದ ಪುರುಷೋತ್ತಮ್ ಶೆಟ್ಟಿ ಕೊಂಬಿಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ದೈಹಿಕ ಶಿಕ್ಷಕರಾದ ಸಂತೋಷ್, ಪ್ರವೀಣ್, ನವೀನ್, ನಿತೇಶ್ ರವರು ವಿವಿಧ ಕ್ರೀಡೆಗಳಾದ ವಾಲಿಬಾಲ್ ಕ್ರಿಕೆಟ್ ಕಬಡ್ಡಿ ಹಗ್ಗ ಜಗ್ಗಾಟಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕಬಕ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಪ್ರಶಾಂತ್ ಮುರ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದ ಆಡಳಿತ ನಿರ್ದೇಶಕ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕ ಹರ್ಷಿತ್ ಹನುಮಜೆ, ಶಿಕ್ಷಕಿಯರಾದ ಸರಿತಾ, ಗುಲಾಬಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here