ಹರಿಯಾಣದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಾಣಿ ಬಾಲವಿಕಾಸದ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು

0

ವಿಟ್ಲ : ಹರಿಯಾಣದ ಗಡ್ಪುರಿಯಲ್ಲಿ ಫೆ.19 ರಿಂದ 23 ರವರೆಗೆ ‘ಏಕ್ ಭಾರತ್ ಶ್ರೇಷ್ಠ ಭಾರತ್’ ಎಂಬ ಥೀಮ್ ನಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ & ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಾಣಿ-ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 10 ಗೈಡ್ಸ್ ವಿದ್ಯಾರ್ಥಿಗಳು, 8 ಸ್ಕೌಟ್ಸ್ ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಸ್ಕೌಟ್ ವಿಭಾಗದಲ್ಲಿ ವರುಣ್, ವರ್ಷಿತ್ ಬಿ. ಎಂ, ಆಶ್ರಯ್ ಎಲ್, ಅಬ್ದುಲ್ ಮಾಹಿಸ್, ದಿಗಂತ್ ಎಸ್, ಸೌರಭ್ ಪ್ರಭು, ಮನ್ವಿತ್ ಕುಲಾಲ್, ದರ್ಶಿಲ್ ಭಾಗವಹಿಸಲಿದ್ದಾರೆ.

ಗೈಡ್ಸ್ ವಿಭಾಗದಲ್ಲಿ ಸಾಕ್ಷಿ, ತನ್ವಿ ಎನ್. ಶೆಟ್ಟಿ, ಚಿನ್ಮಯಿ, ಗೌತಮಿ ಪಿ., ರಿಷಿಕಾ ರೈ, ಸಿಂಚನಾಶ್ರೀ ಶೆಟ್ಟಿ, ಸಿಂಚನ, ದಿಶಾ ಎಂ., ಸುಹಾನಿ ಎಸ್. ಶೆಟ್ಟಿ, ನಿವ್ಯಾ ರೈ ಭಾಗವಹಿಸಲಿದ್ದಾರೆ‌. ಶಿಕ್ಷಕರಾದ ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ. ಹಾಗೂ ಲೇಡಿ ಸ್ಕೌಟ್ ಮಾಸ್ಟರ್ ಸಪ್ನಾ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here