ಬಿಳಿನೆಲೆ ಬೈಕ್ ಗೆ ಬಸ್ ಡಿಕ್ಕಿ-ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು

0

ಕಡಬ: ಇಲ್ಲಿನ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.


ಮೃತಪಟ್ಟವರನ್ನು ಕಡಬ ತಾಲೂಕು ಕೊಂಬಾರು ಮಣಿಭಾಂಡದ ನಿವಾಸಿ ವಾಸು ಎಂದು ಗುರುತಿಸಲಾಗಿದೆ.ಮೆಕ್ಯಾನಿಕ್ ವೃತ್ತಿ ಮಾಡುತ್ತಿದ್ದ ಇವರು ಮರ್ದಾಳದಲ್ಲಿ ಗ್ಯಾರೆಜ್ ಹೊಂದಿದ್ದರು.
ಕೆ ಎಸ್. ಆರ್ ಟಿ ಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here