ಸುಳ್ಯ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ‍್ಯದರ್ಶಿಯಾಗಿ ಪ್ರದೀಪ್ ರೈ ಮನವಳಿಕೆ

0

ಪುತ್ತೂರು: ಸುಳ್ಯ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ‍್ಯದರ್ಶಿಯಾಗಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾಗಿರುವ ಪ್ರದೀಪ್ ರೈ ಮನವಳಿಕೆ ಆಯ್ಕೆಯಾಗಿದ್ದಾರೆ. ಪೆರಬೆ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಸವಣೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸಮಾಜಿಕ ಧಾರ್ಮಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳಲ್ಲಿ ಅನ್ಯಾನ್ಯ ಜವಾಬ್ದಾರಿಯನ್ನು ನಿರ್ವಹಿಸಿರುತ್ತಾರೆ. ಇವರು ಕಡಬ ತಾಲೂಕು ಮನವಳಿಕೆ ದಿ.ಸಂಜೀವ ರೈ ಮತ್ತು ದೇವಕಿ ರೈ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here