ಪಡುಮಲೆ ಶ್ರೀ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸತ್ಯಜಿತ್‌ ಸುರತ್ಕಲ್ ಭೇಟಿ

0

ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧತಿ ಉತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಹಿಂದೂ ನಾಯಕ ಸತ್ಯಜಿತ್‌ ಸುರತ್ಕಲ್ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು ಶಾಲು ಹೊದಿಸಿ ಗೌರವಿಸಿದರು.ಪ್ರಧಾನ ಅರ್ಚಕ ಮಹಾಲಿಂಗ ಭಟ್  ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ ಹೆಚ್ ,ವರ್ದಂತಿ ಉತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಮೇಗಿನಮನೆ, ಕಾರ್ಯದರ್ಶಿ ಪದ್ಮನಾಭ ರೈ ಅರೆಪ್ಪಾಡಿ, ಕೋಶಾಧಿಕಾರಿ ರಾಜೇಶ್ ಸುಳ್ಯಪದವು, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಜನಾರ್ದನ ಪೂಜಾರಿ ಪದಡ್ಕ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here