ಪಡುಮಲೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಮತ್ತು ಸಪರಿವಾರ ದೇವರುಗಳ ಪ್ರತಿಷ್ಠಾ ವರ್ಧಂತಿ ಉತ್ಸವ ಅಂಗವಾಗಿ ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ರಾತ್ರಿ ಮಂಗಳಾರತಿ, ಕಾರ್ತಿಕ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ತೆಲಿಕೆದ ಕಲಾವಿದೆರ್ ಕೊಯಿಲ ಇವರಿಂದ ಗೆಂದಗಿಡಿ ನಾಟಕ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಕೇಶವ ಭಟ್ ಕೂವೆತೋಟ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ.ಹೆಚ್, ಪ್ರತಿಷ್ಠಾ ವರ್ಧಂತಿ ಉತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಮೇಗಿನಮನೆ, ಕಾರ್ಯದರ್ಶಿ ಪದ್ಮನಾಭ ರೈ ಅರೆಪ್ಪಾಡಿ, ಗೌರವಾಧ್ಯಕ್ಷ ರಾಮಕೃಷ್ಣ ಭಟ್ ಚಂದುಕೂಡ್ಲು, ಉಪಾಧ್ಯಕ್ಷ ಕೃಷ್ಣ ಪ್ರಸಾದ್ ರೈ ಪಡುಮಲೆ, ಕೋಶಾಧಿಕಾರಿ ರಾಜೇಶ್ ಸುಳ್ಯಪದವು, ಸಂಚಾಲಕರಾದ ಲಿಂಗಪ್ಪ ಗೌಡ ಮೋಡಿಕೆ, ಗಂಗಾಧರ ರೈ ಮೇಗಿನಮನೆ, ಗೌರವ ಸಲಹೆಗಾರರಾಗಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಕಾರ್ಯದರ್ಶಿ ಜನಾರ್ದನ ಪೂಜಾರಿ ಪದಡ್ಕ ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here