ದ.ಕ. ಜಿಲ್ಲಾ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ, ಪದಾಧಿಕಾರಿಗಳಿಂದ ಆದಿಚುಂಚನಗಿರಿ ಶ್ರೀ ಡಾ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ

0

ಪುತ್ತೂರು: ದ.ಕ. ಜಿಲ್ಲಾ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ|ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.


ಮಾ.4ರಂದು ಶ್ರೀಗಳು ಕಾವೂರಿನ ಶಾಖಾ ಮಠಕ್ಕೆ ಆಗಮಿಸಿದ್ದರು. ಈ ಸಂದರ್ಭ ಶಾಖಾ ಮಠದ ಶ್ರೀಗಳಾದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ ಬಿ, ಸಂಘದ ಪ್ರಧಾನ ಕಾರ್ಯದರ್ಶಿ ಡಾ| ಎನ್.ಎ.ಜ್ಞಾನೇಶ್, ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಜಂಟಿ ಕಾರ್ಯದರ್ಶಿ ದಾಮೋದರ ಗೌಡ, ಕೋಶಾಧಿಕಾರಿ ಪುತ್ತೂರು ಗೌಡ ಸಂಘದ ಮಾಜಿ ಅಧ್ಯಕ್ಷ ಕೆ.ವಿಶ್ವನಾಥ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ಯು, ಸಮಿತಿ ಸದಸ್ಯರಾದ ರಕ್ಷಿತ್ ಪುತ್ತಿಲ, ಕೆ.ವಿಜಯ ಗೌಡ, ಸೌಮ್ಯಲತಾ, ಯಶವಂತ ಕಳುವಾಜೆ, ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಗೌರಿ ಬನ್ನೂರು, ಶ್ರೀಕಾಂತ್ ಎಂ, ಎನ್.ಎ.ಅನೂಪ್, ಮಧುರಾ ಎಂ.ಆರ್, ವಿಶ್ವನಾಥ್ ಎನ್, ಸಾರಿಕಾ ಸುರೇಶ್, ಎಸ್.ಶಾಂತರಾಜ್, ಯು.ಎಸ್ ಲಿಂಗಯ್ಯ ಅವರು ಶ್ರೀಗಳೊಂದಿಗೆ ಸಂಘದ ಕಾರ್ಯಚಟುವಟಿಕೆ ಕುರಿತು ಮಾತನಾಡಿದರು.

LEAVE A REPLY

Please enter your comment!
Please enter your name here