ಇರ್ದೆ ದೇವಾಲಯದಲ್ಲಿ 20 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟಗದ್ದೆ , ಅಜ್ಜಿಕಲ್ಲು, ಅಜಲಡ್ಕ, ರೆಂಜ, ಕಕ್ಕೂರು, ಚೂರಿಪದವು ಇವುಗಳ ಸಹಕಾರದೊಂದಿಗೆ ಶ್ರೀ ರಾಧಾಕೃಷ್ಣ ಭಟ್ ಕಕ್ಕೂರು ಇವರ ಪೌರೋಹಿತ್ಯದಲ್ಲಿ 20 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಏ.6 ರಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜರಗಿತು.

ಬೆಳಿಗ್ಗೆ  ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭವಾಗಿ ಮಧ್ಯಾಹ್ನ  ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.ಪೂಜಾ ಸಮಿತಿಯ ಪದಾಧಿಕಾರಿಗಳು, ದೇವಾಲಯದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಪ್ರಗತಿಬಂಧು  ಸ್ವಸಹಾಯ ಸಂಘಗಳ ಎಂಟು ಒಕ್ಕೂಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು ಹಾಗೂ ಊರ ಭಕ್ತಾದಿಗಳು ಪಾಲ್ಗೊಂಡರು.ಯೋಜನೆಯ ವಲಯ ಮೆಲ್ವೀಚಾರಕ ಚಂದ್ರಶೇಖರ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here