ನರಿಮೊಗರು:ಮತದಾನ ಜಾಗೃತಿ ಅಭಿಯಾನ

0

ನರಿಮೊಗರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಪುತ್ತೂರು ತಾಲೂಕು ಸ್ವೀಪ್ ಸಮಿತಿ,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪುತ್ತೂರಿನ  ನರಿಮೊಗರು ದೇವರಾಜು ಅರಸ್ ಮೆಟ್ರಿಕ್ ನಂತರದ ಬಾಲಕಿರ ವಿದ್ಯಾರ್ಥಿ ನಿಲಯದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿನೂತನವಾಗಿ ಘೋಷವಾಕ್ಯಗಳನ್ನು ಹಿಡಿದು ರಂಗೋಲಿ ಬಿಡಿ, ಕ್ಯಾಂಡಲ್ ಗಳನ್ನು ಉರಿಸಿ ವಿಭಿನ್ನವಾಗಿ ಆಯೋಜಿಸಲಾಯಿತು. 

ಪುತ್ತೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ ಅವರ ಮಾರ್ಗದರ್ಶನದಲ್ಲಿ ಹಾಸ್ಟೆಲ್ ವಾರ್ಡನ್ ಪವಿತ್ರಾ ನಂದಾಲ ಅವರ ನೇತೃತ್ವದಲ್ಲಿ ‘ ನನ್ನ ಮತ ನನ್ನ ಹಕ್ಕು’ ಎಂಬ ಧ್ಯೇಯದೊಂದಿಗೆ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂಬ ಸಂದೇಶವನ್ನು ವಿದ್ಯಾರ್ಥಿನಿಯರ ಮೂಲಕ ತಿಳಿಸುವ ವಿನೂತನ ಪ್ರಯತ್ನವನ್ನು ಮಾಡಿದ್ದಾರೆ.

LEAVE A REPLY

Please enter your comment!
Please enter your name here