ಗುಮ್ಮಟೆಗದ್ದೆ:ಮನೆಗೆ ಕಲ್ಲು ತೂರಾಟ

0

ಪುತ್ತೂರು:ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಎಂಬಲ್ಲಿ ಕಿಡಿಗೇಡಿಗಳು ಮನೆಯೊಂದಕ್ಕೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ಮೇ .1ರಂದು ರಾತ್ರಿ ವೇಳೆ ನಡೆದಿದೆ.
ಗುಮ್ಮಟೆಗದ್ದೆ ಸೂರಪ್ಪ ಗೌಡ ಎಂಬವರ ಮನೆಗೆ ಕಲ್ಲು ತೂರಾಟ ನಡೆದಿದೆ.ರಾತ್ರಿ 8.30ರ ವೇಳೆಗೆ ಮನೆ ಮಂದಿ ಮನೆಯೊಳಗಡೆ ಇರುವ ಸಂದರ್ಭದಲ್ಲಿ ಕಲ್ಲು ಬಿಸಾಡಿದ್ದಾರೆ.ಕಲ್ಲು ಮನೆ ಸಿಮೆಂಟ್ ಶೀಟ್ ಛಾವಣಿ ಮೇಲೆ ಬಿದ್ದ ಶಬ್ದ ಕೇಳಿ ಹೊರಗಡೆ ಬಂದಾಗ ಕಿಡಿಗೇಡಿಗಳು ಓಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ಬಗ್ಗೆ ಮಾಹಿತಿ ಪಡೆದ ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here