ಇಚ್ಲಂಪಾಡಿ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ

0

ನೆಲ್ಯಾಡಿ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮೇ.11ರಂದು ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.


ನದಿಯಿಂದ ಮರಳು ತೆಗೆದು ಇಚ್ಲಂಪಾಡಿಯ ಕುರಿಯಾಳಕೊಪ್ಪ ಎಂಬಲ್ಲಿರುವ ಶೆಡ್‌ನಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here