ಮೇ.14: ಆಲಂಕಾರಿನಲ್ಲಿ ಉಚಿತ ವೈದ್ಯಕೀಯ/ಕ್ಯಾನ್ಸರ್ ತಪಾಸಣಾ ಶಿಬಿರ

0

ಆಲಂಕಾರು: ಜೇಸಿಐ ಆಲಂಕಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲಂಕಾರು ವಲಯ, ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಕಾರು, ಹಿರಿಯ ವಿದ್ಯಾರ್ಥಿ ಸಂಘ ಶ್ರೀ ದುರ್ಗಾಂಬಾ ಪ.ಪೂ.ಕಾಲೇಜು ಆಲಂಕಾರು ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಮೇ.14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಆಲಂಕಾರು ಶ್ರೀ ದುರ್ಗಾಂಬಾ ಪ.ಪೂ.ಕಾಲೇಜಿನಲ್ಲಿ ನಡೆಯಲಿದೆ.
ಜೇಸಿಐ ಭಾರತ ವಲಯ 15ರ ಕಮ್ಯುನಿಟಿ ಅಭಿವೃದ್ಧಿ ವಿಭಾಗದ ವಲಯ ನಿರ್ದೇಶಕ ಭರತ್ ಶೆಟ್ಟಿ ಅವರು ಶಿಬಿರ ಉದ್ಘಾಟಿಸಲಿದ್ದಾರೆ. ಆಲಂಕಾರು ಜೆಸಿಐ ಅಧ್ಯಕ್ಷೆ ಮಮತಾ ಕಮಲಾಕ್ಷ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ, ಆಲಂಕಾರು ವಲಯ ಶ್ರೀ ಕ್ಷೇ.ಧ.ಗ್ರಾ.ಯೋ.ಮೇಲ್ವಿಚಾರಕಿ ಯಶೋದಾ, ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂಥ್ ಕುಮಾರ್ ರೈ, ಆಲಂಕಾರು ಶ್ರೀ ದುರ್ಗಾಂಬಾ ಪ.ಪೂ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಂದರ ಗೌಡ ನೆಕ್ಕಿಲಾಡಿ, ಆಲಂಕಾರು ಶ್ರೀ ದುರ್ಗಾಂಬಾ ಪ.ಪೂ.ಕಾಲೇಜು ಆಡಳಿತಾಧಿಕಾರಿ ಶ್ರೀಪತಿ ರಾವ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here