![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಅರಿಯಡ್ಕ ಗ್ರಾಮದ ಶ್ರೀನಿವಾಸ ಪೂಜಾರಿ ಇವರಿಗೆ ಆರೋಗ್ಯದ ಕಿಡ್ನಿ ಸಮಸ್ಯೆ ಎದುರಾಗಿತ್ತು. ಆರ್ಥಿಕ ಸಮಸ್ಯೆ ಇದ್ದು, ಇವರ ಪತ್ನಿ ಪದ್ಮಾವತಿ ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದಾರೆ.ಇದನ್ನು ಮನಗಂಡ ಅರಿಯಡ್ಕ ಬಿಲ್ಲವ ಗ್ರಾಮ ಸಮಿತಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗು ಸದಸ್ಯರು ಮತ್ತು ಮಾಜಿ ಪದಾಧಿಕಾರಿಗಳು ಬಿಲ್ಲವ ಬಾಂದವರು, ಮಹಿಳಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇತ್ತೀಚೆಗೆ ಸಹಾಯಧನ ನೀಡಿದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.