![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ತೆಂಕು ಮತ್ತು ಬಡಗು ತಿಟ್ಟುಗಳ ಮೇಳಗಳಲ್ಲಿ 47 ವರ್ಷಗಳ ತಿರುಗಾಟ ಮಾಡಿದ ಅಪೂರ್ವ ಸ್ತ್ರೀ ವೇಷಧಾರಿ ಅಂಬಾಪ್ರಸಾದ ಪಾತಾಳ ಇವರಿಗೆ 60ರ ಅಭಿನಂದನಾ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಪಾತಾಳದ ಪೂರ್ಣಶ್ರೀ ನಿಲಯದಲ್ಲಿ ಜರಗಿತು.
![](https://puttur.suddinews.com/wp-content/uploads/2024/05/abhinandane.jpg)
ತಾ.ಪಂ. ಮಾಜಿ ಸದಸ್ಯ ಉಮೇಶ ಶೆಣೈ ಮತ್ತು ಗುರಿಕಾರ ಸತ್ಯನಾರಾಯಣ ಭಟ್ ಆರ್ಲ, ನಿವೃತ್ತ ಮುಖ್ಯ ಗುರು ಬಿ. ಸುಬ್ರಮಣ್ಯರಾವ್ ಅವರು ಪಾತಾಳ ಅಂಬಾಪ್ರಸಾದ ಮತ್ತು ಜಯಂತಿ ಪ್ರಸಾದ್ ಪಾತಾಳ ಇವರನ್ನು ಸನ್ಮಾನಿಸಿದರು. ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನಾ ನುಡಿಗಳನ್ನಾಡಿದರು. ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ ಈ ಸಂದರ್ಭ ಪಾತಾಳ ಅಂಬಾ ಪ್ರಸಾದ್ ಅವರು ಆರ್ಥಿಕ ನೆರವನ್ನು ನೀಡಿದರು. ಇದಕ್ಕೂ ಮೊದಲು ʼಶಾಂಭವಿ ವಿಲಾಸ’ ತಾಳಮದ್ದಳೆ ಜರಗಿತು. ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ ಉಪಸ್ಥಿತರಿದ್ದರು.
ಭಾಗವತರಾಗಿ ವಿಘ್ನೇಶ್ವರ ಭಟ್ ನೂಜಿ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್, ಹಿಮ್ಮೇಳದಲ್ಲಿ ಅಚ್ಯುತ ಪಾಂಗಣ್ಣಾಯ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಚಕ್ರತಾಳದಲ್ಲಿ ರಮೇಶ್ ಭಟ್ ಕಜೆ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ, ಸತೀಶ್ ಆಚಾರ್ಯ ಮಾಣಿ, ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಗುಡ್ಡಪ್ಪ ಬಲ್ಯ, ಜಯರಾಮ ನಾಲ್ಗುತ್ತು, ಸಂಜೀವ ಪಾರೆಂಕಿ, ಶ್ರುತಿ ವಿಸ್ಮಿತ್ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ಸ್ವಾಗತಿಸಿದರು. ಗುಡ್ಡಪ್ಪ ಬಲ್ಯ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯ ಶ್ರೀಧರ್ ಭಟ್ ವಂದಿಸಿದರು.