ಕಡೇಶಿವಾಲಯ: ಸತ್ಯಸಾಯಿ ಸೇವಾ ಸಮಿತಿ, ಭಜನಾ ಮಂಡಳಿಯಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ

0

ಪುತ್ತೂರು: ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ಹಾಗೂ ಸತ್ಯಸಾಯಿ ಭಜನಾ ಮಂಡಳಿ ಕಡೇಶಿವಾಲಯ ಇವರ ಪ್ರಾಯೋಜಕತ್ವದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆಯವರ ಸಹಯೋಗದೊಂದಿಗೆ ಕಡೇಶಿವಾಲಯ ಹಿ.ಪ್ರಾ.ಶಾಲೆಯಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಯಿತು.

ಕಡೇಶಿವಾಲಯ ಪಂಚಾಯತ್ ಅಧ್ಯಕ್ಷೆ ಭಾರತಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಂತರಾಜುರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. 133 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದು 112 ಜನರಿಗೆ ಕನ್ನಡಕ ವಿತರಿಸಲಾಯಿತು. 5 ಶಿಬಿರಾರ್ಥಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಡಾ. ಅನಘ ಶಿಬಿರಾರ್ಥಿಗಳ ತಪಾಸಣೆ ನಡೆಸಿದರು. ಉಷಾಮಣಿ ಪ್ರಾರ್ಥಿಸಿ, ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ನೇತ್ರಾಧಿಕಾರಿ ದಯಾನಂದ ಕೆ. ಎಸ್. ವಂದಿಸಿದರು. ಪೂವಪ್ಪ ಮುಂಡಾಳ ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಮಾನುಜನ್ ಹಾಗೂ ಇತರರು ಸಹಕರಿಸಿದರು.

LEAVE A REPLY

Please enter your comment!
Please enter your name here