![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಮೇ.29ರಂದು ಬೆಳಿಗ್ಗೆ ನಡೆದಿದೆ.
![](https://puttur.suddinews.com/wp-content/uploads/2024/05/kokkada-1.jpg)
ಈತ ನಾಲ್ಕೈದು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಪಕ್ಕದಲ್ಲಿ ಬ್ಯಾಗ್ ದೊರೆತಿದ್ದು ಅದರಲ್ಲಿ ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.