![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಕೆ. ಮಂಜುನಾಥ್ ಕುಮಾರ್ ಹಾಗೂ ಆಯನೂರು ಮಂಜುನಾಥ್ ಅವರ ಪರ 34 ನೆಕ್ಕಿಲಾಡಿ ಗ್ರಾಮದಲ್ಲಿ ಮೇ.30ರಂದು ಮತಯಾಚನೆ ನಡೆಸಲಾಯಿತು.
![](https://puttur.suddinews.com/wp-content/uploads/2024/05/mathayachane-2.jpg)
ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾನಕ್ಕೆ ಅರ್ಹರಾಗಿರುವವರ ಮತದಾರರ ಮನೆ-ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಈ ಸಂದರ್ಭ 34 ನೆಕ್ಕಿಲಾಡಿ ಕಾಂಗ್ರೆಸ್ ವಲಯಾಧ್ಯಕ್ಷೆ ಅನಿ ಮಿನೇಜಸ್, ಬೂತ್ ಅಧ್ಯಕ್ಷರಾದ ಅಬ್ದುಲ್ ಖಾದರ್, ನವಾಝ್ ಕರ್ವೇಲು, ಇಸಾಕ್, ಕಾಂಗ್ರೆಸ್ ಮುಖಂಡರಾದ ಪ್ರಹ್ಮಾದ್ ಬೆಳ್ಳಿಪ್ಪಾಡಿ, ಜಯಶೀಲ ಶೆಟ್ಟಿ, ಗಣೇಶ್ ನಾಯಕ್, ಪ್ರಕಾಶ್ ಗೌಡ, ಖಾದರ್ ಕವೇಲು, ಚಮ್ಮಿ ಮತ್ತಿತರರು ಉಪಸ್ಥಿತರಿದ್ದರು.