ಪರಿಷತ್ ಚುನಾವಣೆ-ಬಿಜೆಪಿಯಿಂದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಪದವೀಧರ ಮತದಾರರ ಸಮಾವೇಶ

0

ಪುತ್ತೂರು: ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಮೇ.31ರಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಮತ ಯಾಚಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ್ರು, ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸವರಾಜಪ್ಪ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಾಗರತ್ನ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ ಮುಖಂಡ ವಿರೂಪಾಕ್ಷಪ್ಪ, ತಾಲ್ಲೂಕು ಖಜಾಂಚಿ ಯತೀಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಮರಾವ್ ಕೋರೆ, ಕೇಶವ ಶಿವಕುಮಾರ್ ಮತ್ತಿತರರು ಹಾಜರಿದ್ದರು

LEAVE A REPLY

Please enter your comment!
Please enter your name here