ನೈರುತ್ಯ ಶಿಕ್ಷಕರ ಕ್ಷೇತ್ರದ, ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮಾಜಿ ಸಚಿವ ರಮಾನಾಥ ರೈರವರಿಂದ ಮತಯಾಚನೆ

0

ವಿಟ್ಲ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಅತ್ಯಂತ ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದ ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಬಂಟ್ವಾಳ ತಾಲೂಕಿನ ಕಕ್ಯಪದವು, ವಾಮದಪದವು, ಸಿದ್ದಕಟ್ಟೆ, ರಾಯಿ, ಉಳಿ, ಮಣಿನಾಲ್ಕೂರು, ನಯನಾಡು, ಕರ್ಪೆ, ಅರಳ, ಲೋರೋಟೊ, ಬುರೂಜ್ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿಗಳಾದ ಕುಮಾರಿ ಅಪ್ಪಿ, ಶಶಿಕಲಾ ಪದ್ಮನಾಭ್ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಪ್ರಮುಖರಾದ ಪಿಯೂಸ್ ಎಲ್ ರೊಡ್ರಿಗಸ್, ಜಗದೀಶ್ ಕೊಯಿಲ, ಅಶೋಕ್ ಸಿದ್ದಕಟ್ಟೆ, ನವೀನ್ ಶೆಟ್ಟಿ, ನೆಲ್ವಿ ಸ್ಟಾರ್, ಸುಧೀರ್ ಶೆಟ್ಟಿ, ರಮೇಶ್ ಮಾಸ್ಟರ್ ರಾಯಿ, ಜಯಕರ ಸಿದ್ದಕಟ್ಟೆ, ದಿನೇಶ್ ಸಿದ್ದಕಟ್ಟೆ, ಬಾಲಕೃಷ್ಣ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here