![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಜಗತ್ತಿಗೆ ಸಮಾನತೆಯ ಮನುಷ್ಯತ್ವದ ಪಾಠ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಬೋಧಿಸಿದ ತತ್ವಗಳನ್ನು ಜೀವನದಲ್ಲಿ ಅಳವಡಿಸಿ ಸರ್ವರನ್ನು ಸಮಾನವಾಗಿ ಕಾಣಬೇಕು. ಸಾಮರಸ್ಯದ ಜೀವನ ನಮ್ಮದಾಗಬೇಕೆಂದು ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ ಹೇಳಿದರು.
![](https://puttur.suddinews.com/wp-content/uploads/2024/06/656-2.jpg)
ಕುರಿಯ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿದ ಕುರಿಯ ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಸಭೆ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದರು.
ಗ್ರಾಮ ಸಮಿತಿಯ ಅಧ್ಯಕ್ಷರಾದ ಶಶಿಧರ್ ಕಿನ್ನಿಮಜಲ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ವಿಮಲಾ ಸುರೇಶ, ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್, ಗುರುಮಂದಿರದ ಕಾರ್ಯನಿರ್ವಾಣಾಧಿಕಾರಿ ಉದಯಕುಮಾರ್ ಕೋಲಾಡಿ ಭಾಗವಹಿಸಿ ಶುಭ ಹಾರೈಸಿದರು. ಕುರಿಯ ಮಹಿಳಾ ವೇದಿಕೆಯ ಅಧ್ಯಕ್ಷರಾದ ರಮ್ಯಾ ಪಡ್ಪು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಹರೀಶ್ ಡಿಂಬ್ರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ 40 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.