ಬಿಳಿಯೂರು : ಮಹಿಳೆಯ ಕತ್ತು ಹಿಸುಕಿ ಕೊಲೆ, ಆರೋಪಿ ಬಾಲಕ ರಿಮಾಂಡ್ ಹೋಮ್ ಗೆ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಆದಿತ್ಯವಾರ ತಡ ರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.


ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ . ಆಗ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟರುವುದರಿಂದ ಆರೋಪಿಯನ್ನು ಬಂಧಿಸಲಾಗಿತ್ತು.


ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಎಂಬವರನ್ನು ವಿವಾಹವಾಗಿದ್ದ ಹೇಮಾವತಿಯವರು ಗಂಡನ ಕುಡಿತದ ಚಟದಿಂದ ಬೇಸತ್ತು ಗಂಡನಿಂದ ದೂರವಾಗಿದ್ದರು. ಹಾಗೂ ವಿವಾಹ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣಾ ಹಂತದಲ್ಲಿತ್ತೆನ್ನಲಾಗಿದೆ. ಹೋಟೇಲೊಂದರಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈಕೆ ತನ್ನ ತಾಯಿ ಮನೆಯಲ್ಲಿ ವಾಸ್ತವ್ಯವನ್ನು ಹೊಂದಿದ್ದು, ಮಗನಂತಿದ್ದ ಅಕ್ಕನ ಮಗನೇ ಮೃಗೀಯ ವರ್ತನೆ ತೋರಿ ಆಕೆಯ ಸಾವಿಗೆ ಕಾರಣವಾಗಿರುವುದು ಮಾತ್ರ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

LEAVE A REPLY

Please enter your comment!
Please enter your name here