ಉಪ್ಪಿನಂಗಡಿ: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು; ಶಾಸಕ ಭರತ್ ಶೆಟ್ಟಿ ವಿರುದ್ಧ ದೂರು

0

ಉಪ್ಪಿನಂಗಡಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ, ಸಂಸದ, ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಶಾಸಕ ಭರತ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಅವರ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕ ಅವಿನಾಶ್ ಗೌಡ ದೂರು ಸ್ವೀಕರಿಸಿದರು. ಈ ಸಂದರ್ಭ ಕಾಂಗ್ರೆಸ್ ಪದಾಧಿಕಾರಿಗಳಾದ ಅಶ್ರಫ್ ಬಸ್ತಿಕ್ಕಾರ್, ಶಬೀರ್ ಕೆಂಪಿ, ಸಿದ್ದೀಕ್ ಕೆಂಪಿ, ಅಬ್ದುರ್ರಹ್ಮಾನ್ ಕೆ., ನಝೀರ್ ಮಠ, ಸತೀಶ್ ಶೆಟ್ಟಿ ಹೆನ್ನಾಳ, ಇಬ್ರಾಹೀಂ ಆಚಿ ಕೆಂಪಿ, ಯು.ಟಿ. ತೌಸೀಫ್, ಬಾಬು ಅಗರಿ, ಸೇಸಪ್ಪ ನೆಕ್ಕಿಲು, ಆದಂ ಕೊಪ್ಪಳ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here