ಅನಾರೋಗ್ಯದಿಂದ ನಿಧನರಾದ ಬಳಂತಿಮೊಗರು ರಾದೀಪ್ ಪೂಜಾರಿ ಮನೆಗೆ ಸಂಸದ ಬ್ರಿಜೇಶ್ ಚೌಟ,ಶಾಸಕ ಅಶೋಕ್ ರೈ ,ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುಣಚ: ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಿಧನರಾದ ಬಳಂತಿಮೊಗರು ನಿವಾಸಿ ರಾದೀಪ್ ಪೂಜಾರಿ ರವರ ನಿವಾಸಕ್ಕೆ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಹಾಗೂ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಸಂಸದ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ , ಕರೀಂ ಕುದ್ದುಪದವು ಹಾಗೂ ಹಲವರು ಉಪಸ್ಥಿತರಿದ್ದರು.


ಹಿಂದೂ ಸಂಘಟನೆಗಳ ಮುಖಂಡ ಅರುಣ್‌ ಕುಮಾರ್ ಭೇಟಿ ನೀಡಿದ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರಸನ್ನ ಮಾರ್ತ, ರಘುನಾಥ್ ರೈ ಉಪಸ್ಥಿತರಿದ್ದರು.
ಮನೆಯವರ ಜೊತೆ ಮಾತನಾಡಿ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here