ಜಾವಗಲ್‌ಗೆ ಬಸ್ ವ್ಯವಸ್ಥೆ ಕಲ್ಪಿಸಲು ಶಕೂರ್ ಹಾಜಿಯವರಿಂದ ಶಾಸಕರಿಗೆ ಮನವಿ

0

ಪುತ್ತೂರು: ಪುತ್ತೂರಿನಿಂದ ಜಾವಗಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪುತ್ತೂರು ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿಯವರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಪುತ್ತೂರಿನಿಂದ ಜಾವಗಲ್‌ಗೆ ಬಸ್ ವ್ಯವಸ್ಥೆ ಇತ್ತು, ಅದನ್ನು ನಿಲ್ಲಿಸಲಾಗಿತ್ತು. ಆ ಬಳಿಕ ಇಲ್ಲಿಗೆ ಬಸ್ ಪುನರಾರಂಭಮಾಡಿಲ್ಲ. ಪುತ್ತೂರಿನಿಂದ ಸಾವಿರಾರು ಮಂದಿ ಜಾವಗಲ್‌ಗೆ ತೆರಳುವ ಭಕ್ತರಿದ್ದು, ಬಸ್ ವ್ಯವಸ್ಥೆ ಮಾಡಿದಲ್ಲಿ ಅನುಕೂಲವಾಗಲಿದೆ.
ಪುತ್ತೂರಿನಿಂದ ಉಪ್ಪಿನಂಗಡಿ-ಉಜಿರೆ-ಬೆಳ್ತಂಗಡಿ-ಚಾರ್ಮಾಡಿ- ಮೂಡಿಗೆರೆ -ಬೇಳೂರು ಮಾರ್ಗವಾಗಿ ಜಾವಗಲ್‌ಗೆ ಪ್ರತಿದಿನ ಬಸ್ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here