ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ-ಪ್ರಾಧಿಕಾರ ರಚನೆ ಆತಂಕ ದೂರ, ರಾಜಕೀಯ ಚುರುಕು

0

ಕಾಣಿಯೂರು: ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಕಳೆದ ಮಾರ್ಚ್ 4ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಲು ಆದೇಶ ಹೊರಡಿಸಲಾಗಿದ್ದು, ಅ 3ರ ಮೊದಲಾಗಿ ಅರ್ಜಿ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಪ್ರಸ್ತಾಪ ಆತಂಕ ದೂರವಾಗಿದೆ. ಈ ಬಗ್ಗೆ ಕಾಂಗ್ರೆಸ್ ವತಿಯಿಂದ ಇತ್ತೀಚಿಗೆ ನಿಯೋಗವೊಂದು ತೆರಳಿ ಪಕ್ಷದ ನಾಯಕರ ಮನವೊಲಿಸಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here