ಆ.16: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಮುಕ್ರಂಪಾಡಿಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ – ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುತ್ತೂರು ವತಿಯಿಂದ ಆ.16ರಂದು ಮುಕ್ರಂಪಾಡಿ ಸುಭದ್ರ ಕಲಾಮಂದಿರದಲ್ಲಿ ವರಮಹಾಲಕ್ಷ್ಮೀ ವೃತಪೂಜೆ ನಡೆಯಲಿದ್ದು ಅದರ ಆಮಂತ್ರಣ ಪತ್ರ ಬಿಡುಗಡೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ಜು.23ರಂದು ನಡೆಯಿತು.


ಆ.16ರಂದು ಬೆಳಿಗ್ಗೆಯಿಂದ ವರಮಹಾಲಕ್ಷ್ಮೀ ಪೂಜೆ ನಡೆದು ಧಾರ್ಮಿಕ ಸಭಾಕಾರ್ಯಕ್ರಮ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಮಾರ್ತ , ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಶಶಾಂಕ್ ಕೋಟೇಚಾ, ಚಂದಪ್ಪ ಮೂಲ್ಯ, ಪ್ರವೀಣ್ ಶೆಟ್ಟಿ ತಿಂಗಳಾಡಿ, ರಾಜೀವ್ ಶೆಟ್ಟಿ, ಗಣೇಶ್ ಭಟ್ ಮಕರಂದ, ಹರೀಶ್ ವಿಟ್ಲ, ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಜಯಲಕ್ಷ್ಮೀ ಶಗ್ರಿತ್ತಾಯ ಮತ್ತಿತ್ತರರು ಉಪಸ್ಥಿತರಿದ್ದರು. ರವಿಕುಮಾರ್ ರೈ ಕೆದಂಬಾಡಿ ಮಠ ಸ್ವಾಗತಿಸಿ ವಂದಿಸಿದರು‌.

LEAVE A REPLY

Please enter your comment!
Please enter your name here