ಕೊಡಿಪ್ಪಾಡಿ:ಸಿಡಿಲು ಬಡಿದು ಹಾನಿಯಾಗಿದ್ದ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುತ್ತೂರು: ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂದರ ನಾಯ್ಕ್ ಮಜಲು ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ವೀಕ್ಷಿಸಿದರು.
ಮನೆಯ ಪರಿಸ್ಥಿತಿಯನ್ನು ವೀಕ್ಷಿಸಿದ ಅರುಣ್ ಕುಮಾರ್ ಪುತ್ತಿಲ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಲ್ಲಿ ಮಾತನಾಡಿ ತಕ್ಷಣಕ್ಕೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಮನವಿಗೆ ಕೂಡಲೇ ಸ್ಪಂದಿಸಿದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರ ಸೂಚನೆಯಂತೆ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಸದ್ಯದ ಮಟ್ಟಿಗೆ ಮನೆಗೆ ಟರ್ಪಾಲು ಹೊದಿಕೆಯ ವ್ಯವಸ್ಥೆಯಾಗಿದೆ. ಕೊಡಿಪ್ಪಾಡಿ ಗ್ರಾ.ಪಂ ಸದಸ್ಯ ನವೀನ್ , ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಮಾರ್ತ ಜೊತೆಗಿದ್ದರು.

LEAVE A REPLY

Please enter your comment!
Please enter your name here