ಪಾಲ್ತಾಡಿ: ನೆಲ್ಲಿಗುರಿಯಲ್ಲಿ ವಿದ್ಯುತ್ ತಂತಿ ಮೇಲಿದ್ದ ಮರದ ಗೆಲ್ಲು ತೆರವು

0

ಸವಣೂರು: ಪಾಲ್ತಾಡಿ ಗ್ರಾಮದ ನೆಲ್ಲಿಗುರಿ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ನೇತಾಡುತ್ತಿದ್ದು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ವತಿಯಿಂದ ತೆರವುಗೊಳಿಸಲಾಯಿತು.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಇರುವುದನ್ನು ಕಂಡು ಅಪಾಯ ಎದುರಾಗುವ ಹಿನ್ನೆಲೆಯಲ್ಲಿ ಸವಣೂರು ಗ್ರಾ.ಪಂ.ಸದಸ್ಯರಾದ ತಾರಾನಾಥ ಬೊಳಿಯಾಲ ಹಾಗೂ ಸತೀಶ್ ಅಂಗಡಿಮೂಲೆ ಅವರು ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ತೆರವುಗೊಳಿಸುವಂತೆ ತಿಳಿಸಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಇಲಾಖೆ ಮರದಗೆಲ್ಲು ತೆರವು ಮಾಡುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ. ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here