ಉಪ್ಪಿನಂಗಡಿ: ಬಿಜೆಪಿ ಕಾರ್ಯಕರ್ತನಿಗೆ ತಂಡದಿಂದ ಹಲ್ಲೆ

0

ಉಪ್ಪಿನಂಗಡಿ: ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಪ್ರವೀಣ (26ವ) ಹಲ್ಲೆಗೊಳಗಾದವರು. ಇವರು ಜು.28ರಂದು ಕಣಿಯೂರು ಕಸಬಾ ಎಂಬಲ್ಲಿರುವ ಅಂಗಡಿಯ ಸಿಟೌಟ್‌ನಲ್ಲಿ ಕುಳಿತ್ತಿದ್ದ ಸಂದರ್ಭ ಅಲ್ಲಿಗೆ ಮಾರುತಿ ಶಿಫ್ಟ್ ಕಾರಿನಲ್ಲಿ ಬಂದ ಅವರ ಪರಿಚಯದ ರಾಧಾಕೃಷ್ಣ, ಪ್ರಜ್ವಲ್, ಕಿರಣ್ ಶಿಶಿಲ ಹಾಗೂ ಪರಿಚಯವಿಲ್ಲದ 5 ಜನರ ತಂಡ ಬಂದಿದ್ದು, ಈ ಪೈಕಿ ಪ್ರಜ್ವಲ್ ಎಂಬಾತ ಪ್ರವೀಣ್ ಅವರಿಗೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದು, ಮತ್ತೋರ್ವ ಆರೋಪಿ ಕಿರಣ್ ಎಂಬಾತ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಆತನೊಂದಿಗೆ ಇತರ ಆರೋಪಿಗಳಾದ ಪ್ರಜ್ವಲ್, ರಾಧಾಕೃಷ್ಣ ಮತ್ತು ಅವರ ಜೊತೆಯಲ್ಲಿ ಬಂದಿದ್ದ ಇನ್ನಿಬ್ಬರು ಕೈಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಹಲ್ಲೆಗೊಳಗಾದ ಪ್ರವೀಣ್ ಅವರು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here