ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಪುಸ್ತಕ ವಿತರಣೆ

0

ಮಕ್ಕಳ ವಿದ್ಯಾಭ್ಯಾಸಕ್ಕೆ ಕ್ಷೇತ್ರದಿಂದ ನಿರಂತರವಾಗಿ ಸಹಕಾರ ನೀಡಲಾಗುತ್ತಿದೆ: ಶ್ರೀ ಶ್ರೀಕೃಷ್ಣ ಗುರೂಜಿ

ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಶ್ರೀಕೃಷ್ಣ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಕ್ಷೇತ್ರದ ಉಪಸ್ಥಿತಿಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು‌.

ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿರವರು ಆಶೀರ್ವಚನ ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕ್ಷೇತ್ರದಿಂದ ನಿರಂತರವಾಗಿ ಸಹಕಾರವನ್ನು ನೀಡಲಾಗುತ್ತಿದೆ. ಕ್ಷೇತ್ರಕ್ಕೆ ಆಗಮಿಸಿದ ಮಕ್ಕಳಿಗೆ ಈಗಾಗಲೇ ಪುಸ್ತಕ ವಿತರಣೆ ಮಾಡಲಾಗಿದೆ‌. ಅಗತ್ಯವಿರುವ ಮಕ್ಕಳಿಗೆ ಶಾಲಾ ಶುಲ್ಕವನ್ನು ಭರಿಸುವ ಕೆಲಸ ಮಾಡಲಾಗುತ್ತಿದೆ. ಹಲವರ ಸಹಕಾರದೊಂದಿಗೆ ಈ ಎಲ್ಲಾ ಕಾರ್ಯವನ್ನು ಮಾಡಲಾಗಿದೆ ಎಂದರು.

ಆಡಳಿತ ಮೊಕ್ತೇಸರರಾದ ಎಂ.ಕೆ.ಕುಕ್ಕಾಜೆ ರವರು ಪುಸ್ತಕದ ಮೌಲ್ಯದ ಬಗ್ಗೆ ಮಾತನಾಡಿದರು. ಮುಚ್ಚಿರಪದವು ಶಾಲಾ ಮುಖ್ಯೋಪಾದ್ಯಾಯರಾದ ನಾಗೇಶ್, ಸುಂದರ ಕುಳಾಲು ಪಳನೀರು, ಮಹಿಳಾ ಸಮಿತಿ ಅಧ್ಯಕ್ಷರಾದ ಅನುರಾದ ಪಳನೀರು ಮೊದಲಾದವರು ಉಪಸ್ಥಿತರಿದ್ದರು.

ದೇವಿಪ್ರಸಾದ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸುಶ್ಮಿತಾ ವಂದಿಸಿದರು.

LEAVE A REPLY

Please enter your comment!
Please enter your name here