ದರ್ಬೆತ್ತಡ್ಕ ಶಾಲೆಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ಹಸ್ತಾಂತರ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿಯಡಿಯಲ್ಲಿ ನಡೆಯುವ ಜ್ಞಾನದೀಪ ಶಿಕ್ಷಕರ ನೇಮಕಾತಿಯಲ್ಲಿ ಕುಂಬ್ರ ವಲಯದ ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಕರು ಆಯ್ಕೆಯಾಗಿದ್ದು ಇದರ ಮಂಜೂರಾತಿ ಪತ್ರವನ್ನು ಕುಂಬ್ರ ವಲಯಧ್ಯಕ್ಷ ಎಸ್ ಮಾಧವ ರೈ ಕುಂಬ್ರ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕುಂಬ್ರ ವಲಯ ಮೇಲ್ವಿಚಾರಕಿ ಜಯಂತಿಯವರು ದರ್ಬೆತ್ತಡ್ಕ ಶಾಲಾ ಎಸ್‌ಡಿಎಂಸಿ ಹಾಗೂ ಶಿಕ್ಷಕ ವೃಂದದವರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ್, ಶಿಕ್ಷಕಿಯರಾದ ಅಶ್ವಿತಾ, ಯೋಗಿಣಿ, ಚೈತ್ರ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ರಾಜು ಎಸ್ ಟಿ ಸ್ವಾಗತಿಸಿ, ಜ್ಞಾನದೀಪ ಶಿಕ್ಷಕಿ ಜ್ಯೋತಿ ವಂದಿಸಿದರು.

LEAVE A REPLY

Please enter your comment!
Please enter your name here