ರೆಂಜಲಾಡಿ: ಮನೆ ಮೇಲೆ ಧರೆ ಕುಸಿದು ಹಾನಿ- ಅಪಾರ ನಷ್ಟ

0

ಪುತ್ತೂರು: ಭಾರೀ ಮಳೆಗೆ ಮನೆಯ ಹಿಂಭಾಗದ ಧರೆ ಕುಸಿದು ಮನೆಗೆ ಹಾನಿಯಾದ ಘಟನೆ ಸರ್ವೆ ಗ್ರಾಮದ ರೆಂಜಲಾಡಿಯಲ್ಲಿ ಜು.30ರಂದು ನಡೆದಿದೆ.

ರೆಂಜಲಾಡಿ ನಿವಾಸಿ ಅಬೂಬಕ್ಕರ್ ಮುಸ್ಲಿಯಾರ್ ಎಂಬವರ ಮನೆಯ ಹಿಂಭಾಗದ ಧರೆ ಕುಸಿದು ಮನೆ ಹಾಗೂ ಶೌಚಾಲಯದ ಮೇಲೆ ಬಿದ್ದ ಪರಿಣಾಮ ಅಪಾರ ವಸ್ತುಗಳು ಹಾನಿಯಾಗಿದ್ದು ಮನೆಯ ಗೋಡೆ ಬಿರುಕು ಬಿಟ್ಟಿದೆ. ಘಟನೆಯಿಂದ ಸುಮಾರು 2 ಲಕ್ಷ ರೂ ನಷ್ಟ ಉಂಟಾಗಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಮುಂಡೂರು ಗ್ರಾಮ ಆಡಳಿತಾಧಿಕಾರಿ ಉಮೇಶ್ ಕಾವಡಿ, ಗ್ರಾಮ ಸಹಾಯಕ ಹರ್ಷಿತ್ ನೇರೋಳ್ತಡ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡೂರು ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here