ಉಕ್ಕಿ ಹರಿದ ನೇತ್ರಾವತಿ, ಕುಮಾರಧಾರ – ಬಾಗಿನ ಅರ್ಪಿಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ದ.ಕ ಜಿಲ್ಲೆಯ ಜೀವ ನದಿಗಳಾದ ಕುಮಾರಾಧಾರ ಮತ್ತು ನೇತ್ರಾವತಿ ಉಕ್ಕಿ ಹರಿಯುತ್ತಿದ್ದು ನದಿ ನೀರು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಮೆಟ್ಟಿಲನ್ನು ಸ್ಪರ್ಶಿಸಿದ್ದು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಬಾಗಿನ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್‌ ರೈ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪಗಳು ನಡೆದಿದೆ, ಅರ್ಚಕರ ಸೂಚನೆಯ ಮೇರೆಗೆ ಬಾಗಿನ ಅರ್ಪಿಸಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here