ವಿದ್ಯಾಭಾರತಿ ಯೋಗ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಿಶೋರ ವಿಭಾಗ ಮತ್ತು ಬಾಲವರ್ಗ ಈ ಎರಡೂ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಬಾಲವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ನಿಶಾಂತ್ -(ಚಂದ್ರಶೇಖರ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ, ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಹುಲ್ (ಚಂದ್ರಕಾಂತ್ ಮತ್ತು ಲಕ್ಷ್ಮೀ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.


ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ (ಜಗನ್ಮೋಹನ ರೈ ಮತ್ತು ಜಲಜ ರೈ ದಂಪತಿಗಳ ಪುತ್ರ)- ದ್ವಿತೀಯ, ಸ್ಕಂದ ಬಳ್ಳಕ್ಕುರಾಯ(ಸುಬ್ರಹ್ಮಣ್ಯ ಬಳ್ಳಕ್ಕುರಾಯ ಮತ್ತು ಸ್ಮೀತಾ ದಂಪತಿಗಳ ಪುತ್ರ) – ತೃತೀಯ, ದುರ್ಗಾಪ್ರಸಾದ್(ವಿಶ್ವನಾಥ ನಾಯ್ಕ ಮತ್ತು ಲೀಲಾವತಿ ದಂಪತಿಗಳ ಪುತ್ರ) – ಚತುರ್ಥ, ರಿತೇಶ್ ನಾಯಕ್ (ರಾಜೇಶ್ ನಾಯಕ್, ಸಂಧ್ಯಾ ನಾಯಕ್ ದಂಪತಿಗಳ ಪುತ್ರ)- ಪಂಚಮ ಸ್ಥಾನ ಮತ್ತು ಅಥ್ಲೆಟಿಕ್ಸ್ ವಿಭಾಗದಲ್ಲಿ ಹರ್ಷವರ್ಧನ(ಪದ್ಮನಾಭ ಮತ್ತು ವಿನೋದಿನಿ ದಂಪತಿಗಳ ಪುತ್ರ) – ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ/ಯೋಗ ಶಿಕ್ಷಕಿ ನಮಿತಾ ಕೆ.ಕೆ ಮತ್ತು ಅನುರಾಧ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here