ಕಾಣಿಯೂರು ಪ್ರಗತಿಯ ಅದ್ವಿಕ್ ರೈ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಪಂದ್ಯಾಟವು ಆ 5 ರಂದು ಸಂತ ವಿಕ್ಟರ್ಸ್ ಶಾಲೆ ಪುತ್ತೂರಿನಲ್ಲಿ ನಡೆಯಿತು. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಗತಿ ಆಂಗ್ಲ ಮಾಧ್ಯಮ ಶಾಲೆ ಕಾಣಿಯೂರಿನ ವಿದ್ಯಾರ್ಥಿಗಳಾದ ನಿಶಾಂತ್ ಕೆ 8ನೇ (35kg-40kg) ವಿಭಾಗದಲ್ಲಿ ದ್ವಿತೀಯ ಸ್ಥಾನ, ದಕ್ಷ ಎಂ ಡಿ 9ನೇ(45kg-50kg) ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಅದ್ವಿತ್ ರೈ 10ನೇ (82+kg) ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಸಂಸ್ಥೆಯ ಕರಾಟೆ ಮಾಸ್ತರ್ ದಿನೇಶ್ ಮುರುಳ್ಯ ತರಬೇತುಗೊಳಿಸಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿರುತ್ತಾರೆ .ಸಾಧಕ ವಿದ್ಯಾರ್ಥಿಗಳನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದಿವಿಶ್ ಮುರುಳ್ಯ, ಮುಖ್ಯಗುರುಗಳು ಮತ್ತು ಸಂಸ್ಥೆ ಎಲ್ಲ ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here