ಆ.9: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ, ಸಾರ್ವಜನಿಕ ಅನ್ನಸಂತರ್ಪಣೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‌ಆ.9ರಂದು ನಾಗರ ಪಂಚಮಿ ನಡೆಯಲಿದೆ.

ನಾಗರ ಪಂಚಮಿ ಅಂಗವಾಗಿ ಬೆಳಿಗ್ಗೆ11 ರಿಂದ ನಾಗದೇವರಿಗೆ ಹಾಲಿನ ಅಭಿಷೇಕ, ಸೀಯಾಳ ಅಭಿಷೇಕ ಹಾಗೂ ನಾಗತಂಬಿಲ ನಡೆಯಲಿದೆ. ಬಳಿಕ ವಲ್ಮೀಕರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಕ್ತಾದಿಗಳು ಈ ದೇವತಾ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here