ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ಸಂಭ್ರಮದ ನಾಗರಪಂಚಮಿ

0

ಕಾಣಿಯೂರು: ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಆ9ರಂದು ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು, ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಉತ್ಸವ ಸಮಿತಿ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here