ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆಯು ಆ.9ರಂದು ನಡೆಯಿತು.

ಬೆಳಿಗ್ಗೆ ಹಾಲಾಭಿಷೇಕ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಅರ್ಚಕ ವೆಂಕಟಕೃಷ್ಣ ಭಟ್ ಅವರು ಪೂಜಾ ವಿಧಿ ವಿದಾನ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ನಿಕಟ ಅಧ್ಯಕ್ಷರಾದ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಸದಸ್ಯರಾದ ವಸಂತ ದಲಾರಿ, ನಾರ್ಣಪ್ಪ ಗೌಡ ಜತ್ತೋಡಿ, ಆನಂದ ಗೌಡ ಬನೇರಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ದೇವಸ್ಥಾನದ ಆಡಳಿತ ಪಂಗಡದ ಅಧ್ಯಕ್ಷ ಕುಸುಮಾಧರ ಬೀರೊಳಿಗೆ ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here