ನೆಲ್ಯಾಡಿ ವಲಯ ಬಂಟರ ಸಂಘದಿಂದ ’ಸೋಣಡೊಂಜಿ ಬಂಟೆರೆ ಸೇರಿಗೆ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಹಾಗೂ ತಾಲೂಕು ಬಂಟರ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ ವಲಯ ಬಂಟರ ಸಂಘ ನೆಲ್ಯಾಡಿ ಇದರ ಆಶ್ರಯದಲ್ಲಿ ಆ.18ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯುವ ’ಸೋಣಡೊಂಜಿ ಬಂಟೆರೆ ಸೇರಿಗೆ’ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೆಲ್ಯಾಡಿ ವಲಯ ಬಂಟರ ಸಂಘದ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತ ಅವರ ಮನೆಯಲ್ಲಿ ಆ.2ರಂದು ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.

ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ನಿರ್ದೇಶಕ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪ್‌ಚಂದ್ರ ರೈ ಕುದ್ಮಾರುಗುತ್ತು, ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತ, ಕಾಯದರ್ಶಿ ಮಹಾಬಲ ಶೆಟ್ಟಿ ದೋಂತಿಲ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಹ್ಲಾದ್ ಶೆಟ್ಟಿ, ಐತ್ತಪ್ಪ ಶೆಟ್ಟಿ, ಸುಭಾಷ್ ಶೆಟ್ಟಿ, ಚಂದ್ರಶೇಖರ ರೈ ರಾಮನಗರ, ಭಾಸ್ಕರ ರೈ, ಪ್ರವೀಣ್ ಭಂಡಾರಿ, ಶಾಂತರಾಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಪಟ್ಟೆ, ಸುಂದರ ಶೆಟ್ಟಿ ಪುರ, ವಿನ್ಯಾಸ್ ಪಿ., ಅನಿಲ್ ರೈ ಹಾರ್ಪಳ, ಜೀವಿತಾಚಂದ್ರಶೇಖರ ಶೆಟ್ಟಿ, ನಮಿತಾ ಎಸ್.ಶೆಟ್ಟಿ, ಚಂದ್ರಕಲಾ, ಸುಖಲತಾ, ಯಶ್ವಿನ್, ಲಕ್ಷಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here