ಆ.18: ವಿಟ್ಲದಲ್ಲಿ ನರೇಂದ್ರ ರೈ ದೇರ್ಲರ ‘ಬದನಾಜೆ ಶಂಕರ್ ಭಟ್-ಅಡಿಕೆ ಮೌಲ್ಯ ವರ್ಧನೆಯ ನೆಲ ವಿಜ್ಞಾನಿ’ ಪುಸ್ತಕ ಬಿಡುಗಡೆ

0

ಪುತ್ತೂರು: ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಜೀವನಪೂರ್ತಿ ಶ್ರಮಿಸಿದ ಬದನಾಜೆ ಶಂಕರ್ ಭಟ್ ಅವರ ಜೀವನ ಚರಿತ್ರೆ ’ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ!’ ಎಂಬ ನರೇಂದ್ರರೈದೇರ್ಲ ಅವರ ಪುಸ್ತಕವು ಆ.18ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

ಮೂಲ ಆಯುರ್ವೇದ ಪರಂಪರೆಯ ಶಂಕರ್ ಭಟ್ಟರು ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು. ಅಂಟು, ಸಾಬೂನು, ವೈನ್, ಲಘು ಪಾನೀಯ, ಲಿಪ್ಪಿಕ್, ಚೊಗರಿನ ಸಾರ, ವಾರ್ನಿಸ್ ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ , ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81 ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ಕರ್ನಾಟಕ ಕೃಷಿ ಕಥನ ಮಾಲಿಕೆಯಲ್ಲಿ ಈ ಪುಸ್ತಕವನ್ನು ರಚಿಸಿದ್ದಾರೆ .ಇದು ಮಾಲಿಕೆಯ ಆರನೆಯ ರೈತಗಾಥೆಯಾಗಿದೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ’ಅಡಿಕೆ ಪತ್ರಿಕೆ’ಯ ಸಂಪಾದಕ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ’ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟ ರು ಅಧ್ಯಕ್ಷತೆ ವಹಿಸಲಿದ್ದಾರೆ. ’ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here