ಚೆಸ್ ಪಂದ್ಯಾಟ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ, ಕೋಡಿಂಬಾಡಿ ಇದರ ಜಂಟಿ ಆಶ್ರಯದಲ್ಲಿ ಆ.7ರಂದು ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ನಿರೀಕ್ಷಿತ್ ಹೆಗ್ಡೆ (ನಿಶ್ಚಯ್ ಕುಮಾರ್ ಹೆಗ್ಡೆ ಮತ್ತು ನಾಗರತ್ನ ದಂಪತಿ ಪುತ್ರ) ಪ್ರಥಮ ಸ್ಥಾನ, 10ನೇ ತರಗತಿಯ ಕಿಶನ್ ಬಡೆಕ್ಕಿಲ ಪ್ರಥಮ ಸ್ಥಾನ ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅವನಿ ರೈ, 9ನೇ ತರಗತಿ( ನವೀನ್ ಪ್ರಸಾದ್ ರೈ ಮತ್ತು ಭವ್ಯ.ಎನ್.ರೈ ದಂಪತಿ ಪುತ್ರಿ) ಪ್ರಥಮ ಸ್ಥಾನ, ಸ್ವಾನಿ ಚನಿಲ,9ನೇ ತರಗತಿ (ರಘುರಾಮಚಂದ್ರ ಚನಿಲ ಮತ್ತು ಸಂಧ್ಯಾ.ಪಿ.ಎಂ ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದಿರುತ್ತಾರೆ.

14ರ ವಯೋಮಾನದ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ಅಭೀಷ್ಟ ಶಂಕರ (ಸತ್ಯಶಂಕರ ಭಟ್ ಮತ್ತು ಹೇಮ ದೀಪಿಕಾ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಶ್ರಾವಣಿ.ಪಿ ( ಪ್ರಕಾಶ್ ನಾಯ್ಕ ಮತ್ತು ವಂದನಾ.ಕೆ ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದು ಹೊಸಮಜಲಿನಲ್ಲಿ ನಡೆಯಲಿರುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ  ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here