ಬಲ್ನಾಡು ಪ್ರಾ.ಕೃ.ಸ. ಸಂಘಕ್ಕೆ ಸತತ 4ನೇ ಬಾರಿಗೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸತತ 4ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ, ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಾ ಕೆ ಪ್ರಶಸ್ತಿ ಸ್ವೀಕರಿಸಿದರು. ನಿರ್ದೇಶಕ ಅಂಬ್ರೋಸ್ ಡಿ ಸೋಜ, ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಕಾರಿ ಸೀತಾರಾಮ ಗೌಡ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ‌.ಎನ್ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹಾಗೂ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here